Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:22 - ಕನ್ನಡ ಸಮಕಾಲಿಕ ಅನುವಾದ

22 ಅವರು ಪಟ್ಟಣದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ, ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲರ ಮಧ್ಯದಲ್ಲಿ ಸಿಕ್ಕಿದರು. ಅವರಲ್ಲಿ ಇಬ್ಬರೂ ತಪ್ಪಿಸಿಕೊಂಡ ಹಾಗೆಯೂ ಅವರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪಟ್ಟಣದೊಳಗೆ ನುಗ್ಗಿದವರೂ ಬಂದುಬಿಟ್ಟದ್ದರಿಂದ ಆಯಿ ಎಂಬ ಊರಿನವರು ಈಚೆಯಲ್ಲಿಯೂ ಆಚೆಯಲ್ಲಿಯೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಹೊಡೆದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು “ಆಯಿ”ಯ ಜನರ ಎರಡು ಕಡೆಗೂ ಇತ್ತು. “ಆಯಿ”ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:22
10 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.


ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.


ನೀವು ಪಟ್ಟಣವನ್ನು ಹಿಡಿದ ತರುವಾಯ, ಬೆಂಕಿ ಹಚ್ಚಿ, ಅದನ್ನು ಸುಟ್ಟುಬಿಟ್ಟು, ಯೆಹೋವ ದೇವರ ಆಜ್ಞೆಯ ಪ್ರಕಾರವೇ ಮಾಡಿರಿ. ನಾನು ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ,” ಎಂದನು.


ಪಟ್ಟಣವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ಕಂಡಾಗ ಯೆಹೋಶುವನೂ ಇಸ್ರಾಯೇಲರೂ ಹಿಂದಿರುಗಿ ಆಯಿ ಎಂಬ ಪಟ್ಟಣದ ಜನರ ಮೇಲೆ ಬಿದ್ದರು.


ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು