Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:28 - ಕನ್ನಡ ಸಮಕಾಲಿಕ ಅನುವಾದ

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಯಾವ ಕಾಲಕ್ಕೂ ತಿರಿಗಿ ಕಟ್ಟಲ್ಪಡದಂತೆ ಹಾಳುದಿಬ್ಬವಾಗ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅನಂತರ ಯೆಹೋಶುವನು “ಆಯಿ” ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:28
11 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.


ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.


“ ‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.


ಯೆಹೋಶುವನು ಯೊರ್ದನ್ ನದಿ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ಇಟ್ಟ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದವರೆಗೂ ಅಲ್ಲಿಯೇ ಇವೆ.


ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು