Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:18 - ಕನ್ನಡ ಸಮಕಾಲಿಕ ಅನುವಾದ

18 ಆದರೆ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದ್ದರಿಂದ ಇಸ್ರಾಯೇಲರು ಅವರ ಮೇಲೆ ದಾಳಿಮಾಡಲಿಲ್ಲ. ಆದರೆ ಇಸ್ರಾಯೇಲರೆಲ್ಲರೂ ಪ್ರಧಾನರಿಗೆ ವಿರೋಧವಾಗಿ ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಭೆಯ ನಾಯಕರು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣ ಮಾಡಿದ್ದರಿಂದ ಇಸ್ರಯೇಲರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರುತಮ್ಮ ನಾಯಕರಿಗೆ ವಿರುದ್ಧ ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಮೂಹಪ್ರಧಾನರು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಹೊಡೆಯಲಿಲ್ಲ. ಆದರೆ ಸಮೂಹದವರೆಲ್ಲಾ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:18
11 ತಿಳಿವುಗಳ ಹೋಲಿಕೆ  

ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?


ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.


ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ,


ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.


ಆಗ ಸಕಲ ಪ್ರಧಾನರು ಎಲ್ಲಾ ಜನರಿಗೆ, “ನಾವು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಅವರಿಗೆ ಪ್ರಮಾಣ ಮಾಡಿದ್ದೇವು. ಆದ್ದರಿಂದ ಅವರನ್ನು ನಾವು ಮುಟ್ಟಕೂಡದು.


“ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ,


ಆದರೆ ನೀನು ಹರಕೆ ಮಾಡದಿದ್ದರೆ, ನೀನು ದೋಷಿಯಾಗುವುದಿಲ್ಲ.


ನಿನ್ನ ತುಟಿಗಳಿಂದ ಹೊರಟಿದ್ದನ್ನು ಮಾಡುವುದಕ್ಕೆ ತಪ್ಪಬೇಡ. ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಬಾಯಿಯಿಂದಲೇ ನೀನು ಹರಕೆ ಮಾಡಿದಿಯಲ್ಲವೇ.


ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು