Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:6
18 ತಿಳಿವುಗಳ ಹೋಲಿಕೆ  

ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”


ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


“ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’


ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.


ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.


ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ.


ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು