Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:9 - ಕನ್ನಡ ಸಮಕಾಲಿಕ ಅನುವಾದ

9 ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:9
29 ತಿಳಿವುಗಳ ಹೋಲಿಕೆ  

ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.


ಪರಲೋಕದ ದೇವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ಆಗ ಅವರು ಸಮಾರ್ಯದಿಂದ ಕರೆತಂದ ಯಾಜಕರಲ್ಲಿ, ಒಬ್ಬನು ಬಂದು ಬೇತೇಲಿನಲ್ಲಿ ವಾಸವಾಗಿದ್ದು, ಅವರು ಯೆಹೋವ ದೇವರಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.


ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.


ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು.


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಆಗ ಸೈತಾನನು ಉತ್ತರವಾಗಿ ಯೆಹೋವ ದೇವರಿಗೆ, “ಲಾಭವಿಲ್ಲದೆ ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿದ್ದಾನೋ?


ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ


ಅವರು ನಮಗೆ ಕೊಟ್ಟ ಉತ್ತರವೇನೆಂದರೆ: “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ.


ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.


ಈಜಿಪ್ಟಿನ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಹಿಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿ,


ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಹಿಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡುತ್ತಿದ್ದರು. ತಪ್ಪು ಮಾಡಿದವನಿಗೆ ಮೋಶೆ, “ಏಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ?” ಎಂದನು.


ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು