Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಮೀನಿಗೆ ಅಪ್ಪಣೆಮಾಡಲು ಅದು ಯೋನನನ್ನು ಒಣನೆಲದಲ್ಲಿ ಕಾರಿ ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಣನೆಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:10
18 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.


ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು.


ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.


ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ, ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.


ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.


ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.


ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು.


ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.


ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.


ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.


ಯೆಹೋವ ದೇವರು ನನ್ನನ್ನು ರಕ್ಷಿಸುವರು. ಆದ್ದರಿಂದ ಯೆಹೋವ ದೇವರ ಆಲಯದಲ್ಲಿ ನಮ್ಮ ಜೀವಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ನಮ್ಮ ಹಾಡುಗಳನ್ನು ನಾವು ಹಾಡುವೆವು.


ನಾನೇ, ನಾನೇ, ಯೆಹೋವ ದೇವರು ಆಗಿದ್ದೇನೆ. ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.


ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು