Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:4 - ಕನ್ನಡ ಸಮಕಾಲಿಕ ಅನುವಾದ

4 ಆಗ ನಾನು ಹೇಳಿದ್ದು, ‘ನಿಮ್ಮ ಕಣ್ಣುಗಳ ಎದುರಿನಿಂದ ಬಹಿಷ್ಕೃತನಾಗಿದ್ದೇನೆ. ಆದರೂ ನಾನು ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಪುನಃ ನೋಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:4
20 ತಿಳಿವುಗಳ ಹೋಲಿಕೆ  

“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.


ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’


ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಆದರೆ ಚೀಯೋನ್ ಎಂಬಾಕೆಯು, “ಯೆಹೋವ ದೇವರು ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನ್ನ ಯೆಹೋವ ದೇವರು ನನ್ನನ್ನು ಮರೆತುಬಿಟ್ಟಿದ್ದಾನಲ್ಲಾ!” ಎಂದುಕೊಂಡಳು.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಅವರನ್ನು ಸೆರೆಹಿಡಿದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಅವರು ನಿಮಗೆ ಪ್ರಾರ್ಥನೆಮಾಡಿದರೆ,


ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,


“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.


ಆದರೂ ಹಗಲಿನಲ್ಲಿ ಯೆಹೋವ ದೇವರು ತಮ್ಮ ಪ್ರೀತಿಯನ್ನು ಆಜ್ಞಾಪಿಸುವರು. ರಾತ್ರಿಯಲ್ಲಿ ದೇವರ ಹಾಡನ್ನು ಹಾಡುವೆನು. ನನ್ನ ಜೀವವಾಗಿರುವ ದೇವರಿಗೆ ನಾನು ಪ್ರಾರ್ಥನೆ ಮಾಡುವೆನು.


ಅಧೋಲೋಕದಲ್ಲಿಯೂ ಗಾಡಾಂಧಕಾರದಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದೀರಿ.


ನಿಮ್ಮ ಬೇಸರವು ನನ್ನ ಮೇಲೆ ಭಾರವಾಗಿದೆ. ನಿಮ್ಮ ಅಲೆಗಳಿಂದೆಲ್ಲಾ ನನ್ನನ್ನು ಮುಳುಗಿಸಿದ್ದೀರಿ.


ನನ್ನ ತಲೆಯ ಮೇಲೆ ನೀರು ಹರಿಯಿತು. ಆಗ ನಾನು ನಾಶವಾದೆನು ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು