Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:9 - ಕನ್ನಡ ಸಮಕಾಲಿಕ ಅನುವಾದ

9 ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:9
14 ತಿಳಿವುಗಳ ಹೋಲಿಕೆ  

ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.


ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.


ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.


ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.


ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು