Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:11 - ಕನ್ನಡ ಸಮಕಾಲಿಕ ಅನುವಾದ

11 ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:11
17 ತಿಳಿವುಗಳ ಹೋಲಿಕೆ  

ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ,


“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.


ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.


ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ,


ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು