Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:2
24 ತಿಳಿವುಗಳ ಹೋಲಿಕೆ  

ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.


ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.


ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.


ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.


ಆದರೆ ಅವನು ತಾನೇ ನೀತಿವಂತನೆಂದು ತೋರಿಸುವುದಕ್ಕೆ, ಅಪೇಕ್ಷೆಯುಳ್ಳವನಾಗಿ ಯೇಸುವಿಗೆ, “ನನ್ನ ನೆರೆಯವನು ಯಾರು?” ಎಂದು ಕೇಳಿದನು.


ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.


ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.


ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.


ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.


ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು