Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನಾನು ಹೇಳುವುದೇನೆಂದರೆ ನನ್ನ ದೇವರೇ ನೀನು ನನ್ನನ್ನು ಕೊಂದುಬಿಡು. ನಾನು ಬದುಕುವದಕ್ಕಿಂತ ಸಾಯುವುದೇ ಮೇಲು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:3
14 ತಿಳಿವುಗಳ ಹೋಲಿಕೆ  

ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.


ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಸಹೋದರರು ಯೆಹೋವ ದೇವರ ಮುಂದೆ ಸತ್ತು ಹೋದಾಗಲೇ, ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.


ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು.


ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.


ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು