Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:6 - ಕನ್ನಡ ಸಮಕಾಲಿಕ ಅನುವಾದ

6 ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ದೇವರಾದ ಯೆಹೋವನು ಯೋನನ ಮೇಲ್ಗಡೆ ಒಂದು ಸೋರೆಗಿಡವು ಹಬ್ಬಿ ಅವನ ತಲೆಗೆ ನೆರಳಾಗಿ ಅವನ ಕರಕರೆಯನ್ನು ತಪ್ಪಿಸುವಂತೆ ಏರ್ಪಡಿಸಿದನು. ಆ ಸೋರೆಗಿಡದಿಂದ ಯೋನನಿಗೆ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರಾದ ಯೆಹೋವನು ಒಂದು ಸೋರೆ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:6
11 ತಿಳಿವುಗಳ ಹೋಲಿಕೆ  

ದುಃಖಪಡುವವರು ದುಃಖಪಡದವರಂತೆಯೂ ಆನಂದ ಪಡುವವರು ಆನಂದಪಡದವರಂತೆಯೂ ವಸ್ತುಗಳ್ನು ಕೊಂಡುಕೊಳ್ಳುವವರು ತಾವು ಕೊಂಡುಕೊಂಡದ್ದು ತಮ್ಮದಲ್ಲ ಎಂಬಂತೆಯೂ


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


ಹಿಜ್ಕೀಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.


ಏನೂ ಇಲ್ಲದಿದ್ದರಲ್ಲಿ ಸಂತೋಷ ಪಡುವವರೇ, ನೀವು ಹೆಚ್ಚಳ ಪಡುವುದು ಶೂನ್ಯವಾಗಿರುವುದರಲ್ಲಿಯೇ? “ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿಲ್ಲವೇ?” ಅಂದುಕೊಳ್ಳುತ್ತೀರಿ.


ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.


ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು.


ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು.


ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು