Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:9
13 ತಿಳಿವುಗಳ ಹೋಲಿಕೆ  

ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ? ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ? ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ?


ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು.


ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.


ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.


ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.


ಆದರೆ ಯೋನನು ತುಂಬಾ ಬೇಸರಗೊಂಡನು. ಅವನಿಗೆ ಬಹು ಕೋಪ ಬಂತು.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ,


“ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು