Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:11
21 ತಿಳಿವುಗಳ ಹೋಲಿಕೆ  

ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.


“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”


ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.


ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಅಬೀಮೆಲೆಕನು ತನ್ನ ಜನರಿಗೆಲ್ಲಾ, “ಈ ಮನುಷ್ಯನನ್ನಾಗಲಿ, ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು,” ಎಂದು ಅಪ್ಪಣೆಕೊಟ್ಟನು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಇವರು ಯಾವಾಗಲೂ ನನ್ನ ಮುಖದ ಮುಂದೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.


ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು.


ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು