Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:21 - ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:21
35 ತಿಳಿವುಗಳ ಹೋಲಿಕೆ  

ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ, ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು. ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು ತೆಗೆದುಕೊಂಡು ಹೋಗುವುದಿಲ್ಲ.


ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.


ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.


ಯೆಹೋವ ದೇವರು ಬಡತನವನ್ನು, ಐಶ್ವರ್ಯವನ್ನು ಕೊಡುವವರೂ, ತಗ್ಗಿಸುವವರೂ, ಉನ್ನತ ಮಾಡುವವರೂ ಆಗಿದ್ದಾರೆ.


ಮಹೋನ್ನತರ ಬಾಯಿಂದ ಕೇಡೂ, ಒಳ್ಳೆಯ ಸಂಗತಿಗಳೂ ಹೊರಡುವುದಿಲ್ಲವೇ?


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪಮಾಡಿದೆವು? ಅದು ಯೆಹೋವ ದೇವರಿಗೆ ವಿರೋಧವಾಗಿಯಲ್ಲವೇ. ಏಕೆಂದರೆ ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ನಿಯಮಕ್ಕೆ ಅವಿಧೇಯರಾದರು.


ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು.


ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಆದ್ದರಿಂದ ಪೂರ್ವದಿಕ್ಕಿನವರೇ, ಯೆಹೋವ ದೇವರನ್ನು ಮಹಿಮೆಪಡಿಸಿರಿ; ಸಮುದ್ರದ ದ್ವೀಪಗಳಲ್ಲಿ ಇಸ್ರಾಯೇಲರ ದೇವರಾದ ಯೆಹೋವ ದೇವರ ಹೆಸರನ್ನು ನೀವು ಘನಪಡಿಸಿರಿ, ಎಂದು ಕೂಗುವರು.


ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.


ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು.


ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.


ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.


ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.


ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.


ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?” ಎಂದಳು.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.


ದೇವರು ತೆಗೆದುಕೊಂಡರೆ, ಅವರಿಗೆ ಅಡ್ಡಿ ಮಾಡುವವರು ಯಾರು? ದೇವರನ್ನು, ‘ನೀವು ಏನು ಮಾಡುತ್ತೀರಿ?’ ಎಂದು ಕೇಳುವವರ‍್ಯಾರು.


ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು; ಇದನ್ನು ದೀನರು ಕೇಳಿ ಸಂತೋಷಪಡುವರು.


ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು