5 ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
5 ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
5 ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
5 ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.
5 ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.
ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು.
ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.
ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.
‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.
ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.
ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು.
ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.
ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.