Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:12 - ಕನ್ನಡ ಸಮಕಾಲಿಕ ಅನುವಾದ

12 ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಾಡುಕತ್ತೆಮರಿ ನರಜನ್ಮ ತಾಳಿದಾಗ ಪೆದ್ದ ಮಾನವ ಬುದ್ಧಿವಂತನಾದ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಜಳ್ಳುಮನುಷ್ಯನು ಬುದ್ಧಿಯನ್ನು ಪಡೆದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕಾಡುಕತ್ತೆಯು ಮನುಷ್ಯನನ್ನು ಹೇಗೆ ಹೆರಲಾರದೋ ಅದೇ ರೀತಿಯಲ್ಲಿ ದಡ್ಡನು ಎಂದಿಗೂ ಜ್ಞಾನಿಯಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:12
24 ತಿಳಿವುಗಳ ಹೋಲಿಕೆ  

ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ?


ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.


ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿಮ್ಮ ಮುಂದೆ ಪಶುವಿನಂತೆ ಇದ್ದೆನು.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.


ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ. ಅವಳ ಅತ್ಯಾಶೆಯಲ್ಲಿ ಗಾಳಿಯನ್ನು ಹೀರಿಕೊಳ್ಳುತ್ತಾಳೆ. ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವರೆಲ್ಲರೂ ಆಯಾಸ ಪಡುವುದಿಲ್ಲ. ಅವಳ ಸಂಗಮಿಸುವ ಋತುಗಳಲ್ಲಿ ಅವಳನ್ನು ಕಾಣುವರು.


ಇದನ್ನು ಬುದ್ಧಿಹೀನ ಮನುಷ್ಯನು ತಿಳಿದುಕೊಳ್ಳನು. ಮೂರ್ಖನು ಇದನ್ನು ಗ್ರಹಿಸನು.


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


“ಮನುಷ್ಯನು ಎಷ್ಟರವನು? ಅವನು ಶುದ್ಧನಿರಲು ಸಾಧ್ಯವೇ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಹುಲ್ಲು ಇರುವಾಗ ಕಾಡುಕತ್ತೆಯು ಅರಚುವುದೋ? ಮೇವು ಇದ್ದರೆ ಎತ್ತು ಕೂಗುವುದೋ?


ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.


ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.


“ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” ಎಂದು ಪ್ರಸಂಗಿ ಹೇಳುತ್ತಾನೆ. “ಸಮಸ್ತವೂ ವ್ಯರ್ಥ! ಎಲ್ಲವೂ ವ್ಯರ್ಥ.”


ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು