Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:19 - ಕನ್ನಡ ಸಮಕಾಲಿಕ ಅನುವಾದ

19 ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; ಪ್ರಧಾನರನ್ನು ಕೆಡವಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಯಾಜಕರುಗಳ ಅಧಿಕಾರವನ್ನು ಕಿತ್ತೊಗೆಯುವನು; ಪ್ರಧಾನರನ್ನು ದಬ್ಬಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:19
16 ತಿಳಿವುಗಳ ಹೋಲಿಕೆ  

ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


“ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.


“ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ; ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.


ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.


ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ; ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.


ದೇವರು ನನ್ನ ಘನತೆಯನ್ನು ತೆಗೆದುಹಾಕಿದ್ದಾರೆ; ನನ್ನ ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾರೆ.


ದುಷ್ಟರು ವೃದ್ಧರಾಗುವವರೆಗೆ ಏಕೆ ಬದುಕುತ್ತಾರೆ? ಅಂಥವರು ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?


ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ,


ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”


ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.


ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ, ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು