Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನುಷ್ಯನಾದರೋ ಸತ್ತು ಬೋರಲ ಬೀಳುವನು, ಪ್ರಾಣಹೋಗಲು ಅವನು ಎಲ್ಲಿಯೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:10
20 ತಿಳಿವುಗಳ ಹೋಲಿಕೆ  

ನನ್ನ ಚರ್ಮವು ಬಿರಿದು ಹಾಳಾದ ಬಳಿಕವೂ, ನಾನು ದೇಹದಾರಿಯಾಗಿಯೇ ದೇವರನ್ನು ನೋಡುವೆನು.


ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.


ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.


ಯೇಸು ತಿರುಗಿ ಗಟ್ಟಿಯಾಗಿ ಕೂಗಿ, ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”


“ಹಾಗಾದರೆ ಏಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದ್ದೀರಿ? ಯಾರೂ ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


“ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ನಾನು ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?


ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.


ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.


ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ?


ನೀರಿನ ವಾಸನೆಯಿಂದ ಅದು ಮೊಳೆತು, ಗಿಡದ ಹಾಗೆ ಅದು ಕೊಂಬೆಗಳನ್ನು ಬಿಡುವುದು.


ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”


ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು; ಅವನನ್ನು ನೋಡಿದವರು, ‘ಅವನೆಲ್ಲಿ?’ ಎಂದು ಕೇಳುವರು.


ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.


ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು