Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:5 - ಕನ್ನಡ ಸಮಕಾಲಿಕ ಅನುವಾದ

5 ಯಾರು ಸ್ವಂತ ಲಾಭಕ್ಕಾಗಿ ಸ್ನೇಹಿತರಿಗೆ ದ್ರೋಹ ಮಾಡುತ್ತಾರೋ, ಅಂಥವರ ಮಕ್ಕಳ ಕಣ್ಣುಗಳು ಮಂಕಾಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗೆಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾವನು ಸ್ವಲಾಭಕ್ಕಾಗಿ ವಿುತ್ರರ ಮೇಲೆ ದೂರು ಹೊರಿಸುವನೋ ಅವನ ಮಕ್ಕಳು ಕಂಗೆಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ‘ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ’ ಎಂಬ ಗಾದೆಯಿದೆ. ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:5
12 ತಿಳಿವುಗಳ ಹೋಲಿಕೆ  

ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.


ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.


ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”


ಆದರೆ ನಿನ್ನ ತಂದೆ ದಾವೀದನಿಗೋಸ್ಕರ ನಿನ್ನ ಕಾಲದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಿದುಕೊಳ್ಳುವೆನು.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.


ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.


“ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.


“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು