Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು; ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನನ್ನು ಅವನ ಕಾಲುಗಳೆ ಬಲೆಗೆ ಬೀಳಿಸುವುವು ಅವನನ್ನು ಪಾಳುಗುಂಡಿಯ ಮೇಲೆ ನಡೆಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಗುಂಡಿಯನ್ನು ಮುಚ್ಚಿದ ತಟ್ಟಿಯ ಮೇಲೆ ನಡೆಯುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:8
18 ತಿಳಿವುಗಳ ಹೋಲಿಕೆ  

ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.


ಆದ್ದರಿಂದ ನಿನ್ನ ಸುತ್ತಲೂ ಉರುಲುಗಳು ಕಾದಿವೆ; ಹಠಾತ್ತಾಗಿ ಬರುವ ವಿಪತ್ತು ನಿನ್ನನ್ನು ತಲ್ಲಣಗೊಳಿಸುತ್ತದೆ.


ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.


ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.


ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.


ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆದ್ದರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು. ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.


ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು.


ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಸಲಹೆಗಾರರೂ ಹೆಂಡತಿಯಾದ ಜೆರೆಷಳೂ ಅವನಿಗೆ, “ಯಾವನ ಮುಂದೆ ನಿನ್ನ ಬೀಳುವಿಕೆ ಪ್ರಾರಂಭವಾಯಿತೋ, ಆ ಮೊರ್ದೆಕೈ ಯೆಹೂದ್ಯನಾಗಿದ್ದರೆ ನೀನು ಅವನನ್ನು ಜಯಿಸಲಾರೆ. ನಿಶ್ಚಯವಾಗಿ, ನೀನು ಅವನಿಂದ ನಾಶವಾಗುವಿ,” ಎಂದರು.


ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.


ಹಸಿದವರು ಅವನ ಪೈರನ್ನು ತಿಂದುಬಿಡುವರು; ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು.


ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.


ದೇವರಿಂದಲೇ ನನಗೆ ಅನ್ಯಾಯವಾಗಿದೆ; ದೇವರು ತಮ್ಮ ಬಲೆಯನ್ನು ನನ್ನ ಮೇಲೆ ಬೀಸಿದ್ದಾರೆಂದು ನಿಮಗೆ ತಿಳಿದಿರಲಿ.


ಭೂಮಿಯ ನಿವಾಸಿಗಳೇ, ಭಯವೂ, ಕುಳಿಯೂ, ಬಲೆಯೂ ನಿಮಗೆ ಕಾದಿವೆ.


ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು