Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:7
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು.


ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ, ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಿಲ್ಲ.


ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ; ನನ್ನ ಶರೀರ ಜ್ವರದಿಂದ ಬಿಸಿಯಾಗಿದೆ.


ಯೆಹೋವ ದೇವರು ನಿಮ್ಮನ್ನು ಈಜಿಪ್ಟನ್ನು ಬಾಧಿಸುವಂತೆ ಹುಣ್ಣುಗಳಿಂದಲೂ, ಮೂಲವ್ಯಾಧಿಯಿಂದಲೂ, ಕಜ್ಜಿಯಿಂದಲೂ, ಇಸುಬಿನಿಂದಲೂ ನೀವು ವಾಸಿಯಾಗದ ರೋಗಗಳಿಂದ ನಿಮ್ಮನ್ನು ಬಾಧಿಸುವರು.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”


ನನ್ನ ದೇಹವು ಹುಳಹಕ್ಕಳೆಗಳನ್ನೂ ಧರಿಸಿಕೊಂಡಿದೆ; ನನ್ನ ಚರ್ಮವು ಕಜ್ಜಿಯಿಂದ ಬಿರಿದು ಹೋಗಿದೆ.


“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.


ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.


ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು.


“ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು