Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ - ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ದೇವರನ್ನು ದೂಷಿಸಿ ಸಾಯಿ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:9
13 ತಿಳಿವುಗಳ ಹೋಲಿಕೆ  

ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.


ಅದಕ್ಕೆ ಮನುಷ್ಯನು, “ನೀನು ನನ್ನ ಸಂಗಡ ಇರಿಸಿದ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು. ನಾನು ತಿಂದೆನು,” ಎಂದು ಹೇಳಿದನು.


ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.


ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.


ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.


ಅವಳು ಔತಣದ ಏಳು ದಿವಸಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಆದರೆ ಏಳನೆಯ ದಿವಸದಲ್ಲಿ ಅವಳು, ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಒಗಟಿನ ಅರ್ಥವನ್ನು ತಿಳಿಸಿದನು. ಆಗ ಆಕೆ ತನ್ನ ಜನರಿಗೆ ಆ ಒಗಟನ್ನು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು