Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:22 - ಕನ್ನಡ ಸಮಕಾಲಿಕ ಅನುವಾದ

22 ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು; ಘೋರ ದುಃಖವು ಅವನ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸಮೃದ್ಧಿಯಿಂದಿರುವಾಗಲೇ ಕೊರತೆ ಅವನನ್ನು ಕಾಡುವುದು ಶ್ರಮಜೀವಿಗಳೆಲ್ಲರ ಕೈ ಅವನ ಮೇಲೆ ಎರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವದು. ಶ್ರಮೆಯನ್ನನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನು ಸಮೃದ್ಧಿಯಿಂದಿರುವಾಗಲೇ ಇಕ್ಕಟ್ಟಿನಿಂದ ಕುಗ್ಗಿಸಲ್ಪಡುವನು; ಅವನ ಕಷ್ಟಗಳು ಅವನ ಮೇಲೆ ಬೀಳುವವು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:22
13 ತಿಳಿವುಗಳ ಹೋಲಿಕೆ  

ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು.


ದೇವರು ನನ್ನನ್ನು ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾರೆ; ಹೌದು, ದುಷ್ಟರ ಕೈಗೆ ನನ್ನನ್ನು ಎಸೆದುಬಿಟ್ಟಿದ್ದಾರೆ.


ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ; ಅವನ ಸೊತ್ತು ಭೂಮಿಯ ಮೇಲೆ ವಿಸ್ತಾರವಾಗುವುದಿಲ್ಲ.


ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿರುತ್ತಾರೆ.


ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಹಸಿದವರು ಅವನ ಪೈರನ್ನು ತಿಂದುಬಿಡುವರು; ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು.


ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು