Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:26 - ಕನ್ನಡ ಸಮಕಾಲಿಕ ಅನುವಾದ

26 ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನ ನಿಧಿನಿಕ್ಷೇಪಕ್ಕಾಗಿ ಕಾರಿರುಳು ಕಾದಿದೆ ಯಾರೂ ಹೊತ್ತಿಸದ ಬೆಂಕಿ ಅವನನು ಕಬಳಿಸಲಿದೆ ಅವನ ಗುಡಾರದಲಿ ಉಳಿದದ್ದೆಲ್ಲ ನಾಶವಾಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ. ಯಾರೂ ಹೊತ್ತಿಸದ ಬೆಂಕಿಯಿಂದ ಅವನು ನಾಶವಾಗುವನು. ಅವನ ಗುಡಾರದಲ್ಲಿ ಉಳಿದಿರುವುದೆಲ್ಲವನ್ನು ಬೆಂಕಿಯು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:26
13 ತಿಳಿವುಗಳ ಹೋಲಿಕೆ  

ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.


ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.


ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.


ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು