Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:15 - ಕನ್ನಡ ಸಮಕಾಲಿಕ ಅನುವಾದ

15 ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ಈ ಸರ್ವಶಕ್ತ ಎಷ್ಟರವನು : ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಸರ್ವಶಕ್ತನು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆಮಾಡುವದರಿಂದ ಪ್ರಯೋಜನವೇನು? ಎಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:15
16 ತಿಳಿವುಗಳ ಹೋಲಿಕೆ  

ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


“ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.”


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


“ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗದಿಂದ ತೊಲಗಿರಿ. ಇಸ್ರಾಯೇಲರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ,” ಎಂದು ಹೇಳುತ್ತಾರೆ.


ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.


ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?”


ಏಕೆಂದರೆ, ‘ನೀತಿಯಿಂದ ನನಗೇನು ಪ್ರಯೋಜನವಾಯಿತು? ನಾನು ಪಾಪಮಾಡದೆ ಇದ್ದುದರಿಂದ ನನಗೆ ಲಾಭವೇನು? ಎಂದು ನೀನು ದೇವರಿಗೆ ಕೇಳಿದಿ.’


“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು! ಸರ್ವಶಕ್ತ ನಮಗೇನು ಮಾಡಲು ಸಾಧ್ಯ?’ ಎಂದು ಹೇಳಿಕೊಳ್ಳುತ್ತಿದ್ದರು.


ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?


ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು?


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು