Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:20 - ಕನ್ನಡ ಸಮಕಾಲಿಕ ಅನುವಾದ

20 ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನ ರೌದ್ರರಸವನ್ನು ಪಾನಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ; ಸರ್ವಶಕ್ತನಾದ ದೇವರ ಕೋಪವನ್ನು ಅನುಭವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:20
16 ತಿಳಿವುಗಳ ಹೋಲಿಕೆ  

ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.


ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು.


ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.


ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.


ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು.


ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ; ಅವುಗಳ ವಿಷವನ್ನು ನನ್ನ ಆತ್ಮವು ಹೀರುತ್ತಿದೆ; ದೇವರ ವಿಷಯವಾದ ಹೆದರಿಕೆಗಳು ನನ್ನನ್ನು ಸುತ್ತುವರೆದಿವೆ.


ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ ತಾವು ಬಿಟ್ಟುಹೋಗುವ ಕುಟುಂಬದವರ ಚಿಂತೆ ಅವರಿಗೆ ಎಲ್ಲಿ?


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.”


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು