Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:22 - ಕನ್ನಡ ಸಮಕಾಲಿಕ ಅನುವಾದ

22 “ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೇಲಣ ಲೋಕದವರಿಗೂ ನ್ಯಾಯತೀರಿಸುವ ದೇವರಿಗೆ ಜ್ಞಾನಬೋಧನೆಯನ್ನು ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:22
23 ತಿಳಿವುಗಳ ಹೋಲಿಕೆ  

“ಕರ್ತದೇವರ ಮನಸ್ಸನ್ನು ಅರಿತವರು ಯಾರು? ಅವರಿಗೆ ಆಲೋಚನೆಯನ್ನು ನೀಡುವವರು ಯಾರು?”


ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.


“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”


“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?


ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.


ದೇವರು ತಮ್ಮ ಪರಿಶುದ್ಧರನ್ನು ಆತುಕೊಂಡಿರುವುದಿಲ್ಲ; ಆಕಾಶಗಳೂ ದೇವರ ದೃಷ್ಟಿಯಲ್ಲಿ ಶುದ್ಧವಲ್ಲ.


ತಮ್ಮ ಸೇವಕರಲ್ಲಿ ದೇವರು ನಂಬದೆ, ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು,


ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ ತಾವು ಬಿಟ್ಟುಹೋಗುವ ಕುಟುಂಬದವರ ಚಿಂತೆ ಅವರಿಗೆ ಎಲ್ಲಿ?


ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು?


ಶೂರನ ಹಾಗೆ ನಡುವನ್ನು ಕಟ್ಟಿಕೋ, ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು.


ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು