Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:30 - ಕನ್ನಡ ಸಮಕಾಲಿಕ ಅನುವಾದ

30 ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:30
22 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.


ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ಆ ದಿವಸವು ರೌದ್ರದ ದಿವಸವು, ಇಕ್ಕಟ್ಟು ಸಂಕಟಗಳ ದಿವಸವು, ಹಾಳುಪಾಳುಗಳ ದಿವಸವು, ಕತ್ತಲೆ ಮಬ್ಬುಗಳ ದಿವಸವು, ಕಾರ್ಮುಗಿಲ ಕಗ್ಗತ್ತಲ ದಿವಸವು,


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.


ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.


“ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.


ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”


“ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ? ಎಷ್ಟು ಸಾರಿ ವಿಪತ್ತು ಅವರ ಮೇಲೆ ಬರುತ್ತದೆ? ದೇವರು ವೇದನೆಗಳನ್ನು ತಮ್ಮ ಬೇಸರದಿಂದ ಹಂಚುವುದು ಎಷ್ಟು ಸಾರಿ?


ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.


ಮಾರ್ಗದಲ್ಲಿ ಹಾದು ಹೋಗುವವರನ್ನು ನೀವು ವಿಚಾರಿಸಲಿಲ್ಲವೋ? ಅವರ ಅನುಭವಗಳು ನಿಮಗೆ ಹಿಡಿಸಲಿಲ್ಲವೋ?


ದುಷ್ಟರ ಮಾರ್ಗವನ್ನು ಮುಖಾಮುಖಿಯಾಗಿ ಅವರಿಗೆ ತೋರಿಸುವವರು ಯಾರು? ಅವರು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿ ತೀರಿಸುವವರು ಯಾರು?


ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?


ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು.


ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.


ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.


ಇತರರ ಹಾಗೆ ಅವರಿಗೆ ಯಾವುದೇ ಹೊರೆ ಇಲ್ಲ ಮಾನವರಿಗೆ ತಗುಲುವ ಯಾವುದೇ ವ್ಯಾಧಿಯೂ ಅವರಿಗೆ ತಗುಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು