Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:16 - ಕನ್ನಡ ಸಮಕಾಲಿಕ ಅನುವಾದ

16 ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಕಾಲಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:16
19 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು; ಅವನ ಕೊಂಬೆಯು ಹಸಿರಾಗಿರುವುದಿಲ್ಲ.


ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.


ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ?


ಆದ್ದರಿಂದ ನಾನು, “ನನ್ನ ದೇವರೇ, ನನ್ನ ಆಯುಷ್ಯದ ಮಧ್ಯದಲ್ಲಿ ನನ್ನನ್ನು ತೆಗೆದುಕೊಳ್ಳಬೇಡಿರಿ; ನಿಮ್ಮ ವರ್ಷಗಳು ತಲತಲಾಂತರಗಳಿಗೂ ಇವೆ.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ನೀರು ಕಲ್ಲುಗಳನ್ನು ಸವೆಯಿಸುವಂತೆಯೂ, ಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವಂತೆಯೂ, ಮನುಷ್ಯನ ನಿರೀಕ್ಷೆಯನ್ನು ನೀವು ನಾಶಮಾಡುತ್ತೀರಿ.


ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?


ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ.


ಅವರು ಗಾಳಿಯ ಮುಂದೆ ಹುಲ್ಲಿನ ಹಾಗೆ ಆದದ್ದು ಎಷ್ಟು ಸಾರಿ? ಬಿರುಗಾಳಿಯು ಹೊಡಕೊಂಡು ಹೋಗುವ ಹೊಟ್ಟಿನ ಹಾಗೆ ಕೊಚ್ಚಿಕೊಂಡು ಹೋದದ್ದು ಎಷ್ಟು ಸಾರಿ?


“ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ.


ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ. ಅವರು ಬೆಳಿಗ್ಗೆ ಬೆಳೆಯುವ ಹುಲ್ಲಿನ ಹಾಗೆ ಇದ್ದಾರೆ.


ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.


ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.


ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು