Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:21 - ಕನ್ನಡ ಸಮಕಾಲಿಕ ಅನುವಾದ

21 “ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; ಇದರಿಂದ ನಿನಗೆ ಸಮೃದ್ಧಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರ ಚಿತ್ತಕ್ಕೆ ಮಣಿದು ಸಮಾಧಾನದಿಂದಿರು ಇದರಿಂದ ನಿನಗೆ ಶುಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರ ಚಿತ್ತಕ್ಕೆ ಒಡಂಬಟ್ಟು ಸಮಾಧಾನಹೊಂದು, ಇದರಿಂದ ನಿನಗೆ ಶುಭವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯೋಬನೇ, ಈಗಲಾದರೊ ನಿನ್ನನ್ನು ದೇವರಿಗೆ ಒಪ್ಪಿಸಿಕೊಟ್ಟು ಆತನೊಂದಿಗೆ ಸಮಾಧಾನ ಮಾಡಿಕೊ, ಆಗ ನೀನು ಆಶೀರ್ವಾದವನ್ನು ಹೊಂದಿಕೊಂಡು ಅಭಿವೃದ್ಧಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:21
11 ತಿಳಿವುಗಳ ಹೋಲಿಕೆ  

“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.


ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.


ಸಿಂಹಗಳು ಹಸಿದು ಬಳಲಬಹುದು, ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


“ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು