Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:3 - ಕನ್ನಡ ಸಮಕಾಲಿಕ ಅನುವಾದ

3 ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಸಜ್ಜನನಾಗಿದ್ದರೆ ಅದರಿಂದ ಸರ್ವಶಕ್ತನಿಗೆ ಸುಖವೇ? ನಿನ್ನ ನಿರ್ದೋಷ ನಡತೆಯಿಂದ ಆತನಿಗೆ ಲಾಭವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ನೀತಿವಂತನಾಗಿರುವದು ಸರ್ವಶಕ್ತನಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ನಡತೆಯು ಒಳ್ಳೆಯದಾಗಿದ್ದರೆ, ಅದರಿಂದ ದೇವರಿಗೆ ಸಹಾಯವಾಗುವುದೇ? ಇಲ್ಲ. ನೀನು ನೀತಿವಂತನಾಗಿದ್ದರೆ ಸರ್ವಶಕ್ತನಾದ ದೇವರಿಗೆ ಅದರಿಂದೇನಾದರೂ ಲಾಭವಾಗುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:3
20 ತಿಳಿವುಗಳ ಹೋಲಿಕೆ  

ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.


ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.


ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.


ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ.


“ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. ದುಷ್ಟರು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” ಎಂದು ತೀರ್ಮಾನಿಸಿಕೊಂಡೆನು.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


“ಮನುಷ್ಯನಿಂದ ದೇವರಿಗೆ ಪ್ರಯೋಜನವೇನು? ಒಬ್ಬನು ಜ್ಞಾನಿಯಾಗಿದ್ದರೂ ದೇವರಿಗೆ ಪ್ರಯೋಜನವಾಗಿರುವನೇ?


“ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ?


ನೀನು ನೀತಿವಂತನಾಗಿದ್ದರೆ, ದೇವರಿಗೇನು ಕೊಟ್ಟಂತಾಯಿತು? ಅಥವಾ ದೇವರು ನಿನ್ನ ಕೈಯಿಂದ ಏನು ತೆಗೆದುಕೊಂಡಂತಾಯಿತು?


ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ.


“ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.”


ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು