Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:9 - ಕನ್ನಡ ಸಮಕಾಲಿಕ ಅನುವಾದ

9 ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:9
20 ತಿಳಿವುಗಳ ಹೋಲಿಕೆ  

ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ.


ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.


ನ್ಯಾಯಸ್ಥಾನದಲ್ಲಿ ನನಗೆ ಬೆಂಬಲ ಉಂಟೆಂದು ಕಂಡು, ನಾನು ದಿಕ್ಕಿಲ್ಲದವರ ಮೇಲೆ ನನ್ನ ಕೈಮಾಡಿದ್ದರೆ,


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.


ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.


ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.


ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ತಂದೆಯಿಲ್ಲದವರಿಗಾಗಿ ಚೀಟು ಹಾಕುತ್ತೀರಿ, ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.


ಮೋವಾಬಿನ ಕೊಂಬು ಕಡಿದು ಹಾಕಲಾಗಿದೆ; ಅದರ ತೋಳು ಮುರಿಯಲಾಗಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು