Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:12 - ಕನ್ನಡ ಸಮಕಾಲಿಕ ಅನುವಾದ

12 ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತುಂಬಿದ ಪಟ್ಟಣದಲ್ಲಿ ನರಳುವರು, ಗಾಯಪಟ್ಟವರು ಮೊರೆಯಿಡುವರು. ದೇವರಾದರೋ ಅದನ್ನು ಅಯುಕ್ತವೆಂದೆಣಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ, ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:12
23 ತಿಳಿವುಗಳ ಹೋಲಿಕೆ  

ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


“ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ. ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ. ನನ್ನ ನಾಮವು ಪ್ರತಿದಿನವೂ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ! ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ.


ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ವಿಪತ್ತು ಅಕಸ್ಮಾತ್ತಾಗಿ ಮರಣವನ್ನು ತಂದರೆ, ನಿರಪರಾಧಿಯ ಬುದ್ಧಿಹೀನತೆಗೆ ದೇವರು ನಗುವರು.


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವುದನ್ನು ಹೊದ್ದುಕೊಂಡು ಮಲಗಿಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ಏಕೆಂದರೆ ನಾನು ಅನುಕಂಪ ಉಳ್ಳವನು.


ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು?


ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ.


“ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?


ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?


ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು