Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:18 - ಕನ್ನಡ ಸಮಕಾಲಿಕ ಅನುವಾದ

18 “ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 (ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ನೀವು ಹೇಳುವದೇನಂದರೆ]- ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವದು. ದ್ರಾಕ್ಷೇತೋಟಗಳ ಕಡೆಗೆ ತಿರುಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:18
14 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.


ತಾರ್ಷೀಷಿನ ಮಗಳೇ, ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು. ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ.


ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.


ಅವರ ಊಟವೇ ಅವರಿಗೆ ಉರುಲಾಗಲಿ. ಸುಖವಾಗಿರುವವರಿಗೆ ಅದು ಬೋನಾಗಲಿ.


ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ.


ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.


ಆಪಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ದಿನಗಳು ವೇಗವಾಗಿ ಗತಿಸಿಹೋಗುತ್ತವೆ.


ಮೂಢನು ಬೇರೂರುವುದನ್ನು ನಾನು ನೋಡಿದೆನು, ಕೂಡಲೇ ಅವನ ಮನೆ ಶಾಪಕ್ಕಿಡಾಗುವುದನ್ನು ಕಂಡೆನು.


ಇದಲ್ಲದೆ ನೀನು ಕಾಣದಷ್ಟು ಕತ್ತಲು ನಿನಗಿರುವುದು; ಜಲಪ್ರವಾಹವೂ ನಿನ್ನನ್ನು ಮುಳುಗಿಸುವುದು.


ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.


ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ.


ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು