Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:23 - ಕನ್ನಡ ಸಮಕಾಲಿಕ ಅನುವಾದ

23 ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:23
25 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,


ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?


ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.


ಕಳ್ಳರ ಗುಡಾರಗಳು ವೃದ್ಧಿಯಾಗಿವೆ; ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ.


ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ?


ನಿಮಗೆ ಮಾಂಸದ ಕಣ್ಣುಗಳುಂಟೋ? ಮನುಷ್ಯರು ನೋಡುವಂತೆಯೇ ನೀವೂ ನೋಡುತ್ತೀರೋ?


ದೇವರು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ?


“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.


ನಾನು ನಿಮ್ಮ ಸೂತ್ರಗಳನ್ನೂ ಶಾಸನಗಳನ್ನೂ ಪಾಲಿಸುತ್ತೇನೆ, ಏಕೆಂದರೆ ನನ್ನ ಮಾರ್ಗಗಳೆಲ್ಲವೂ ನಿಮಗೆ ತಿಳಿದಿರುತ್ತವೆ.


ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು