Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:4 - ಕನ್ನಡ ಸಮಕಾಲಿಕ ಅನುವಾದ

4 ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿರ್ಗತಿಕರನ್ನು ಸ್ಥಳದಿಂದ ಸ್ಥಳಕ್ಕೆ ಅಲೆದಾಡಿಸುವರು. ಬಡವರು ಈ ದುಷ್ಟರಿಗೆ ಹೆದರಿ ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:4
22 ತಿಳಿವುಗಳ ಹೋಲಿಕೆ  

ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.


ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.


ಕೊಲೆಗಾರನು ಮುಂಜಾನೆಯೇ ಎದ್ದು, ದಿಕ್ಕಿಲ್ಲದವರನ್ನೂ, ಬಡವರನ್ನೂ ಸಂಹರಿಸುತ್ತಾನೆ; ರಾತ್ರಿಯಲ್ಲಿ ಕಳ್ಳನಂತೆ ವರ್ತಿಸುತ್ತಾನೆ.


ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.


ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು.


ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,


ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.


ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.


ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.


ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.


ಏಕೆಂದರೆ ಅವನು ಯಾರಿಗೂ ದಯೆ ತೋರಿಸಲಿಲ್ಲ. ಬಡವನನ್ನೂ, ದೀನನನ್ನೂ, ಮನಗುಂದಿದವನನ್ನೂ ಹಿಂಸಿಸಿ ಸಾಯಿಸಬೇಕೆಂದು ಯತ್ನಿಸಿದನು.


ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.


“ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ?


ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ?


ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.


ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ಬಟ್ಟೆ ಇಲ್ಲದೆ ಕಷ್ಟಪಡುವವರನ್ನೂ, ಹೊದಿಕೆ ಇಲ್ಲದೆ ನಡುಗುವವರನ್ನೂ ನಾನು ನೋಡಿದಾಗೆಲ್ಲಾ,


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು