Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:20 - ಕನ್ನಡ ಸಮಕಾಲಿಕ ಅನುವಾದ

20 ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ವಿಪತ್ತುಗಳು ಅವನನ್ನು ಹಿಂದಟ್ಟಿ ಹಿಡಿಯುವುವು ಹೊಳೆಯಂತೆ ಬಿರುಗಾಳಿ ಅವನನ್ನು ಅಪಹರಿಸುವುದು ರಾತ್ರಿಯಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಪತ್ತುಗಳು ಇದ್ದಕ್ಕಿದ್ದಂತೆ ಬರುವ ಪ್ರವಾಹದಂತೆ ಅವನನ್ನು ಆವರಿಸಿಕೊಳ್ಳುತ್ತವೆ. ಬಿರುಗಾಳಿಯು ಅವನನ್ನು ರಾತ್ರಿಯಲ್ಲಿ ಹೊತ್ತುಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:20
17 ತಿಳಿವುಗಳ ಹೋಲಿಕೆ  

ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ನನ್ನನ್ನು ನೀವು ಅಗಾಧದಲ್ಲಿಯೂ, ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿರಿ. ಪ್ರವಾಹಗಳು ನನ್ನನ್ನು ಸುತ್ತಿಕೊಂಡವು. ನಿಮ್ಮ ಎಲ್ಲಾ ಅಲೆಗಳೂ ನಿಮ್ಮ ತೆರೆಗಳೂ ನನ್ನ ಮೇಲೆ ದಾಟಿಹೋದವು.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.


ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.


ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”


ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.


ಅವರು ಗಾಳಿಯ ಮುಂದೆ ಹುಲ್ಲಿನ ಹಾಗೆ ಆದದ್ದು ಎಷ್ಟು ಸಾರಿ? ಬಿರುಗಾಳಿಯು ಹೊಡಕೊಂಡು ಹೋಗುವ ಹೊಟ್ಟಿನ ಹಾಗೆ ಕೊಚ್ಚಿಕೊಂಡು ಹೋದದ್ದು ಎಷ್ಟು ಸಾರಿ?


ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು.


ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.


“ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ.


ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ. ಅವರು ಬೆಳಿಗ್ಗೆ ಬೆಳೆಯುವ ಹುಲ್ಲಿನ ಹಾಗೆ ಇದ್ದಾರೆ.


ಯೆಹೋವ ದೇವರೇ, ನಿಮ್ಮ ನಾಮವನ್ನು ಅವರು ಹುಡುಕುವಂತೆ ಅವರ ಮುಖಗಳನ್ನು ನಾಚಿಕೆಯಿಂದ ತುಂಬಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು