Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:22 - ಕನ್ನಡ ಸಮಕಾಲಿಕ ಅನುವಾದ

22 ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರು ಕರುಣವಿಲ್ಲದೆ ಅವನ ಮೇಲೆ [ತನ್ನ ಬಾಣಗಳನ್ನು] ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇಬೇಕೆಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:22
21 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.


“ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ, ಕಂಚಿನ ಬಾಣ ಅವನನ್ನು ತಿವಿಯುವುದು.


ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.


ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?


ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.


ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು