Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:5 - ಕನ್ನಡ ಸಮಕಾಲಿಕ ಅನುವಾದ

5 ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನ್ಯಾಯವಂತರೆಂದು ನಾನು ಒಪ್ಪುವದು ದೂರವಾಗಿರಲಿ, ಸಾಯುವ ತನಕ ನನ್ನ ಯಥಾರ್ಥತ್ವದ ಹೆಸರನ್ನು ಕಳಕೊಳ್ಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:5
17 ತಿಳಿವುಗಳ ಹೋಲಿಕೆ  

ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.


ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.


ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.


ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು.


ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.


ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ; ಪುನಃ ಯೋಚಿಸಿರಿ, ನನ್ನ ಪ್ರಾಮಾಣಿಕತೆಯು ಪ್ರಶ್ನಿಸಲಾಗಿದೆ.


ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.


ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು.


ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.


ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.


ನಾನು ದಾರಿತಪ್ಪಿ ನಡೆದಿದ್ದರೆ, ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ,


‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು