Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:9 - ಕನ್ನಡ ಸಮಕಾಲಿಕ ಅನುವಾದ

9 ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನಿಗೆ ಶ್ರಮೆಬರಲು ದೇವರು ಅವನ ಮೊರೆಯನ್ನು ಆಲೈಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ದುಷ್ಟನು ಆಪತ್ತುಗಳಲ್ಲಿರುವಾಗ ದೇವರಿಗೆ ಮೊರೆಯಿಡುವನು; ಆದರೆ ದೇವರು ಅವನಿಗೆ ಕಿವಿಗೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:9
19 ತಿಳಿವುಗಳ ಹೋಲಿಕೆ  

ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.


ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.


ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.


ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ.


“ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.


ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ, ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.


ಅವನಿಗೆ ನ್ಯಾಯತೀರಿಸುವಾಗ ಅಪರಾಧಿಯೆಂದು ತೀರ್ಪು ಹೊಂದಲಿ; ಅವನ ಪ್ರಾರ್ಥನೆಯೇ ಅವನನ್ನು ಖಂಡಿಸಲಿ.


ನೀವು ತಿರುಗಿಕೊಂಡು ಯೆಹೋವ ದೇವರ ಮುಂದೆ ಅತ್ತಿರಿ. ಆದರೆ ಯೆಹೋವ ದೇವರು ನಿಮ್ಮ ಧ್ವನಿಗೆ ಕಿವಿಗೊಡಲಿಲ್ಲ.


ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ.


ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು