Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:1 - ಕನ್ನಡ ಸಮಕಾಲಿಕ ಅನುವಾದ

1 ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆಳ್ಳಿ ಸಿಕ್ಕುವ ಗಣಿಯೂ ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಬೆಳ್ಳಿಯ ಗಣಿಗಳು ಇವೆ; ಚಿನ್ನವನ್ನು ಶುದ್ಧೀಕರಿಸುವ ಸ್ಥಳಗಳೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:1
15 ತಿಳಿವುಗಳ ಹೋಲಿಕೆ  

ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ನಾನು ನಿನ್ನನ್ನು ಪರಿಶೋಧಿಸಿದ್ದೇನೆ. ಆದರೆ ಬೆಳ್ಳಿಯಂತೆ ಅಲ್ಲ, ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.


ಒಂಟೆಗಳು ನೀರು ಕುಡಿದಾದ ಮೇಲೆ, ಆ ಮನುಷ್ಯನು ಅರ್ಧ ತೊಲೆಯ ತೂಕದ ಚಿನ್ನದ ಮೂಗುತಿಯನ್ನು, ಹತ್ತು ತೊಲೆ ತೂಕದ ಎರಡು ಬಳೆಗಳನ್ನು ಆಕೆಗೆ ಕೊಟ್ಟನು.


“ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.


ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”


ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು