Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:26 - ಕನ್ನಡ ಸಮಕಾಲಿಕ ಅನುವಾದ

26 ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮಳೆಗೆ ಕಟ್ಟಳೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮಳೆಯನ್ನೂ ಗುಡುಗುಸಿಡಿಲುಗಳ ಮಳೆಯನ್ನೂ ಎಲ್ಲಿಗೆ ಕಳುಹಿಸಬೇಕೆಂದು ನಿರ್ಧರಿಸಿದಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:26
20 ತಿಳಿವುಗಳ ಹೋಲಿಕೆ  

ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು?


ತಮ್ಮ ಮಿಂಚನ್ನು ದೇವರು ಆಕಾಶಮಂಡಲದಲ್ಲಿ ಹರಡುತ್ತಾರೆ; ಅದನ್ನು ಭೂಮಿಯ ಅಂಚುಗಳವರೆಗೆ ಕಳುಹಿಸುತ್ತಾರೆ.


ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,


ಹಾಳು ಬೈಲುಗಳಿಗೆ ತೃಪ್ತಿಯನ್ನು ಉಂಟುಮಾಡುವುದು; ಹಸಿರಾದ ಹುಲ್ಲನ್ನು ಮೊಳಿಸುವುದು.


ಮೋಡವನ್ನು ತೇವಾಂಶದಿಂದ ಭಾರಮಾಡುತ್ತಾರೆ; ಮೇಘಮಂಡಲವು ದೇವರ ಮಿಂಚನ್ನು ಚದರಿಸುತ್ತದೆ.


ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.


ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ.


ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.


ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ. ಮಳೆಗೆ, ‘ಭೂಮಿಯ ಮೇಲೆ ರಭಸದಿಂದ ಸುರಿ’ ಎಂದು ಆಜ್ಞಾಪಿಸುತ್ತಾರೆ.


ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ ನಿರ್ಜನ ಪ್ರದೇಶದಲ್ಲಿಯೂ, ಸುರಿಯುವುದು.


ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.


“ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು;


“ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, ಮಂಜಿನಿಂದ ತಿಳಿಮಳೆ ಸುರಿಯುತ್ತವೆ.


ಮೋಡಗಳ ವಿಸ್ತೀರ್ಣತೆಯನ್ನೂ, ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು?


ದೇವರ ಧ್ವನಿಯ ಘರ್ಜನೆಯನ್ನು ಕೇಳಿರಿ. ದೇವರ ಬಾಯಿಂದ ಹೊರಡುವ ಮಾತನ್ನು ಲಕ್ಷ್ಯಕೊಟ್ಟು ಆಲಿಸಿರಿ.


ಮಿಂಚಿನ ತರುವಾಯ ಘರ್ಜನೆಯ ಶಬ್ದ ಕೇಳಿಬರುವುದು; ದೇವರು ಮಹತ್ತಿನ ಶಬ್ದದಿಂದ ಗುಡುಗುತ್ತಾರೆ; ದೇವರ ಸ್ವರ ಕೇಳುವಾಗ ಅದನ್ನು ತಡೆಯಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು