Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:16 - ಕನ್ನಡ ಸಮಕಾಲಿಕ ಅನುವಾದ

16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:16
19 ತಿಳಿವುಗಳ ಹೋಲಿಕೆ  

ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ.


ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.


ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.


ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು.


ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.


ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು.


ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.


ನೀವು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು. ಆ ಕಾರ್ಯವು ನಿಶ್ಚಯವಾಗಿ ಸತ್ಯವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,


ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು.


ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.


“ನಿನ್ನ ಸೇವಕನು ನನಗೆ ಹೀಗೆ ಮಾಡಿದ,” ಎಂದು ತನ್ನ ಹೆಂಡತಿ ಹೇಳಿದ್ದನ್ನು ಯಜಮಾನನು ಕೇಳಿ, ಅವನ ಕೋಪವೇರಿತು.


ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು.


ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ?


ನನ್ನ ಮನೆಯ ಕೆಲಸದವರು, ‘ಯೋಬನು ನೀಡಿದ ಭೋಜನದಿಂದ ತೃಪ್ತರಾಗದವರು ಯಾರು?’ ಎಂದು ಹೇಳಿಕೊಳ್ಳುತ್ತಿದ್ದರಲ್ಲವೆ?


ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ; ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿಟ್ಟಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು