Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:23 - ಕನ್ನಡ ಸಮಕಾಲಿಕ ಅನುವಾದ

23 ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:23
12 ತಿಳಿವುಗಳ ಹೋಲಿಕೆ  

ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.


ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ.


ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ.


ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.


ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’


ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ.


ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


“ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು; ಈಗ ನೀವೇ ನನಗೆ ವಿಮುಖರಾಗಿ ನನ್ನನ್ನು ತೆಗೆದುಹಾಕುವಿರಾ?


“ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು