Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:14 - ಕನ್ನಡ ಸಮಕಾಲಿಕ ಅನುವಾದ

14 ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರು ನ್ಯಾಯಸ್ಥಾಪನೆಗೆ ನಿಂತಾಗ ನಾನೇನು ಮಾಡುತ್ತಿದ್ದೆ? ಆತ ವಿಚಾರಣೆಗೆ ಬಂದಾಗ ನಾನೇನು ಉತ್ತರಕೊಡುತ್ತಿದ್ದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರು [ನ್ಯಾಯಸ್ಥಾಪನೆಗೆ] ಏಳುವಾಗ ನಾನು ಏನು ಮಾಡೇನು? ಆತನು ವಿಚಾರಿಸುವಾಗ ಯಾವ ಉತ್ತರ ಕೊಟ್ಟೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? ನಾನು ಮಾಡಿದ್ದಕ್ಕೆ ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯುವಾಗ ನಾನೇನು ಉತ್ತರ ಕೊಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:14
19 ತಿಳಿವುಗಳ ಹೋಲಿಕೆ  

ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ.


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.


“ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ?


ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.


“ಒಂದು ವೇಳೆ ನನಗೂ ನನ್ನ ದಾಸದಾಸಿಯರಿಗೂ ನನ್ನ ಮೇಲೆ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ತಿರಸ್ಕರಿಸಿದ್ದರೆ,


ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ?


ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು