Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:39 - ಕನ್ನಡ ಸಮಕಾಲಿಕ ಅನುವಾದ

39 ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ, ಅದರ ದಣಿಗಳ ಪ್ರಾಣ ಹಾನಿಗೆ ಕಾರಣನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಕೂಲಿಕೊಡದೆ ಆ ಭೂಮಿಯ ಫಲವನು ನಾನು ಸವಿದಿದ್ದರೆ ಅದರ ದಣಿಗಳ ಪ್ರಾಣಹಾನಿಗೆ ನಾನು ಕಾರಣನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾನು ಹಣಕೊಡದೆ ಅದರ ಸಾರವನ್ನನುಭವಿಸಿ ಅದರ ದಣಿಗಳ ಪ್ರಾಣ ಹೋದದ್ದಕ್ಕೆ ಕಾರಣನಾಗಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಾನು ರೈತರಿಗೆ ಬೆಳೆಯಲ್ಲಿ ಪಾಲು ಕೊಟ್ಟೆನು; ಯಾರೂ ಹಸಿವೆಯಿಂದ ಇರಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:39
11 ತಿಳಿವುಗಳ ಹೋಲಿಕೆ  

ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


“ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.


ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.


ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ.


“ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು