Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:21 - ಕನ್ನಡ ಸಮಕಾಲಿಕ ಅನುವಾದ

21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:21
18 ತಿಳಿವುಗಳ ಹೋಲಿಕೆ  

“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?


ಇವು ಜ್ಞಾನಿಗಳ ಹೇಳಿಕೆಗಳಾಗಿವೆ: ನ್ಯಾಯ ವಿಚಾರಣೆಯಲ್ಲಿ ಪಕ್ಷಪಾತವು ಸರಿಯಲ್ಲ.


ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ, ದೇವರು ನಿಶ್ಚಯವಾಗಿಯೂ ನಿಮ್ಮನ್ನು ಖಂಡಿಸುವರು.


ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು.


“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.


ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು; ನನ್ನ ತುಟಿಗಳನ್ನು ತೆರೆದು ಉತ್ತರಕೊಡುವೆನು.


ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ.


ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ.


“ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?


ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.


“ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು