Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಬೂಜಿನವನಾದ ಬರಕೇಲನ ಮಗ ಎಲೀಹುವನು ಕೊಟ್ಟ ಉತ್ತರ: “ನಾನು ಕಿರಿಯವನು, ನೀವು ಎಷ್ಟೋ ಹಿರಿಯವರು ಎಂದೇ ಸಂಕೋಚಪಟ್ಟೆನು ನನ್ನ ಅಭಿಪ್ರಾಯ ತಿಳಿಸಲು ಅಂಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು - ನಾನು ಯೌವನಸ್ಥನು, ನೀವು ಅತಿವೃದ್ಧರು; ಆದದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆ ಮಾಡಲು ಅಂಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು: “ನಾನು ವಯಸ್ಸಿನಲ್ಲಿ ಚಿಕ್ಕವನು, ನೀವು ವೃದ್ಧರು. ಆದಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:6
14 ತಿಳಿವುಗಳ ಹೋಲಿಕೆ  

ತಲೆ ನರೆತವರೂ, ಹೆಚ್ಚು ಮುದುಕರಾದವರೂ, ನಿನ್ನ ತಂದೆಗಿಂತ ವೃದ್ಧರಾದವರೂ ನಮ್ಮಲ್ಲಿ ಇದ್ದಾರೆ.


ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು.


ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.


“ನೀನು ಮೊದಲು ಹುಟ್ಟಿದ ಪುರುಷನೋ? ಬೆಟ್ಟಗಳಿಗೆ ಮುಂಚಿತವಾಗಿ ಹುಟ್ಟಿದವನೋ?


“ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.


ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.


ಆ ಮೂವರ ಮಾತಿನಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ, ಅವನ ಕೋಪ ಮತ್ತಷ್ಟು ಉರಿಯಿತು.


ಮುದುಕರಲ್ಲಿ ಜ್ಞಾನವು ಇರುವುದಿಲ್ಲವೋ? ದೀರ್ಘಾಯುಷ್ಯರಲ್ಲಿ ತಿಳುವಳಿಕೆಯನ್ನು ತರುವುದಿಲ್ಲವೋ?


ಎಲೀಹು ಮುಂದುವರೆಸಿ ಹೇಳಿದ್ದೇನೆಂದರೆ:


ಎಲೀಹು ಮತ್ತೆ ಹೇಳಿದ್ದೇನೆಂದರೆ:


ಎಲೀಹು ಮುಂದುವರಿದು ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು