Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:8
24 ತಿಳಿವುಗಳ ಹೋಲಿಕೆ  

ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು?


ದೇವರ ಆತ್ಮರು ನನ್ನನ್ನು ಉಂಟುಮಾಡಿದರು. ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು.


ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.


ದೇವರು ಮನುಷ್ಯರ ಕಿವಿಗಳನ್ನು ತೆರೆದು, ಎಚ್ಚರಿಕೆಗಳಿಂದ ಮುದ್ರೆಹಾಕಿ ಮಾತಾಡುತ್ತಾರೆ.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,


ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.


ದೇವರು ಸೊಲೊಮೋನನಿಗೆ ಅತ್ಯಧಿಕವಾಗಿ ಜ್ಞಾನವನ್ನೂ, ಗ್ರಹಿಕೆಯನ್ನೂ, ಸಮುದ್ರ ತೀರದಲ್ಲಿಯ ಮರಳಿನ ಹಾಗೆಯೇ ವಿವೇಕವನ್ನೂ ಕೊಟ್ಟರು.


ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.


“ಜ್ಞಾನವೂ, ಶಕ್ತಿಯೂ ದೇವರಲ್ಲಿವೆ; ಸಮಾಲೋಚನೆಯೂ, ಗ್ರಹಿಕೆಯೂ ದೇವರವೇ.


“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.


ಬಲವೂ, ಜ್ಞಾನವೂ ದೇವರಲ್ಲಿವೆ; ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು.


ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. ಅದು ಅವನ ಅಂತರಂಗವನ್ನು ಶೋಧಿಸುತ್ತದೆ.


ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು